ರಜನಿಕಾಂತ್ ಚೇತರಿಕೆ. ಆಸ್ಪತ್ರೆಗೆ ಬೇಟಿ ನೀಡಿದ ಮುಖ್ಯಮಂತ್ರಿ
ತಮಿಳುನಾಡಿನ ಕಾವೇರಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಜನಿಕಾಂತ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ಥಳಿಯ ಮಾಧ್ಯಮಗಳು ವರದಿ ಮಾಡಿವೆ. ಮೆದುಳಿಗೆ ರಕ್ತ ಸಂಚಾರ ವ್ಯವಸ್ತೆಯನ್ನ ಸಹಜ ಸ್ಥಿತಿಗೆ ತರುವ ಶಸ್ತ್ರ ಚಿಕಿತ್ಸೆಯನ್ನ ಅವರಿಗೆ ನಡೆಸಲಾಗಿತ್ತು.
ಭಾನುವಾರ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಆಸ್ಪತ್ರೆಗೆ ಬೇಟಿ ನೀಡಿ ರಜನಿಕಾಂತ್ ಆರೋಗ್ಯವನ್ನ ವಿಚಾರಿಸಿದ್ದಾರೆ. ಇನ್ನೂ ಕೆಲವು ದಿನಗಳಲ್ಲಿ ರಜನಿಕಾಂತ್ ಅವರು ಡಿಸ್ಚಾರ್ಜ್ ಆಗಿ ಮನೆಗೆ ತೆರಳಲಿದ್ದಾರೆ. ಅಕ್ಟೋಬರ್ 28 ರಂದು ನಿಯಮಿತ ಆರೋಗ್ಯ ತಪಾಸಣೆಗಾಗಿ ಹಾಸ್ಪಿಟಲ್ ಗೆ ಬೇಟಿ ನೀಡಿದ್ದರು.
ಕಳೆದ ಸೋಮವಾರ ದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನ ಪಡೆದುಕೊಂಡಿದ್ದರು.
ರಜನಿಕಾಂತ್ ಅಭಿನಯದ ಅಣ್ಣಾತೆ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದ್ದು ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ತೆರೆಗೆ ಬರಲಿದೆ.