ಹೈದರಾಬಾದ್ : ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಮಟಾದ ಪ್ರವಾಹದಿಂದಾಗಿ ಸಾಕಷ್ಟು ತೊಂದರೆಯಾಗಿದೆ.. ಇದ್ರಿಂದಾಗಿ ಅನೇಕರು ನಷ್ಟ ಅನುಭವಿಸಿದ್ದಾರೆ. ರೈತರು ಬೆಳೆ ನಾಶದಿಂದ ಕಂಗಾಲಾಗಿದ್ರೆ, ಅನೇಕರ ಆಸ್ತಿ ಪಾಸ್ತಿಗೆ ಹಾನಿಯಾಗಿದೆ. ಹೀಗೆ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ತಾರೆಯರು ಸಹಾಯಾಸ್ತ ಚಾಚಿದ್ದಾರೆ. ಇತ್ತೀಚೆಗೆ ಅಷ್ಟೇ ಚಿರಂಜೀವಿ ಹಾಗೂ ಪುತ್ರ ರಾಮ್ ಚರಣ್ ತಲಾ 25 ಲಕ್ಷ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದ್ರು.
ಇದೀಗ ಬಾಹುಬಲಿ ಪ್ರಭಾಸ್ ಬರೋಬ್ಬರಿ 1 ಕೋಟಿ ರೂಪಾಯಿಗಳ ದೇಣಿಗೆಯನ್ನ ನೀಡುವ ಮೂಲಕ ರಿಯಲ್ ಲೈಫ್ ನಲ್ಲೂ ಹೀರೋ ಎನಿಸಿಕೊಂಡಿದ್ದಾರೆ. ಕೇವಲ ಇವರಷ್ಟೇ ಅಲ್ದೇ ಜೂನಿಯರ್ ಎನ್ಟಿಆರ್ , ಮಹೇಶ್ ಬಾಬು ಅವರು ಕೂಡ ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ದೇಣಿಗೆ ನೀಡಿದ್ದರು. ಇದೀಗ ಪ್ರಭಾಸ್ ನೆರವಿಗೆ ಮುಂದಾಗಿದ್ದಾರೆ.