4 ವರ್ಷಗಳ ನಂತರ 2017 ರ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನಕ್ಕೆ ಮುಂದಾದ ಸರ್ಕಾರ
ಸುಮಾರು 4 ವರ್ಷಗಳ ನಂತರ ಕರ್ನಾಟಕ ರಾಜ್ಯ ಸರ್ಕಾರವು 2017 ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ..
ಡಾ.ರಾಜ್ ಕುಮಾರ್ ಹುಟ್ಟು ಹಬ್ಬದ ದಿನದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 2017ನೇ ಸಾಲಿನ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಪ್ರತಿ ವರ್ಷವೂ ಆ ವರ್ಷದ ಚಲನಚಿತ್ರ ಪ್ರಶಸ್ತಿಯನ್ನು ನೀಡಲಾಗ್ತಿತ್ತು.. ಆದ್ರೆ ಸುಮಾರು 4 ವರ್ಷಗಳಿಂದ ಈ ಪ್ರಕ್ರಿಯೆ ನಿಂತಿತ್ತು.. 2017ರಿಂದ ಈವರೆಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ಕೊರೊನಾ , ರಾಜಕೀಯ ಬೆಳವಣಿಗೆಗಳು ಸೇರಿ ನಾನಾ ಕಾರಣಗಳಿವೆ.. 2017ರಲ್ಲಿ ಎರಡು ಬಾರಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದ್ದರೂ, ನಾನಾ ಕಾರಣಗಳಿಂದಾಗಿ ನಿಗದಿತ ದಿನಾಂಕಗಳಂದು ನಡೆಯಲಿಲ್ಲ.
2018 ನವೆಂಬರ್ 24 ರಂದು ಬೆಂಗಳೂರಿನಲ್ಲಿ 2017ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಬೇಕಿತ್ತು. ಆದ್ರೆ ಮಂಡ್ಯದ ಬಳಿ ಬಸ್ಸೊಂದು ಕೆರೆಗೆ ಬಿದ್ದು ಹಲವರು ಪ್ರಾಣ ಕಳೆದುಕೊಂಡರು. ಜತೆಗೆ ಅಂದೇ ಅಂಬರೀಶ್ ಕೂಡ ನಿಧನರಾದರು. ಹಾಗಾಗಿ ಪ್ರದಾನ ಸಮಾರಂಭ ನಡೆಯಲಿಲ್ಲ
ಈಗ ಇದಕ್ಕೆ ಕಾಲ ಕೂಡಿಬಂದಿದೆ.. ಈ ಸಮಾರಂಭದಲ್ಲಿ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಜಿ.ಎನ್.ಲಕ್ಷ್ಮೀಪತಿ, ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ನಿರ್ದೇಶಕಿ ಲಕ್ಷ್ಮಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಎಸ್.ನಾರಾಯಣ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಆದರ್ಶ ಈಶ್ವರಪ್ಪ ಅವರ ಶುದ್ದಿ, ಕೋಡ್ಲು ರಾಮಕೃಷ್ಣ ಅವರ ಮಾರ್ಚ್ 24 ಮತ್ತು ಅಭಯ ಸಿಂಹ ನಿರ್ದೇಶನದ ಪಡ್ಡಾಯಿ ಕ್ರಮವಾಗಿ ಪ್ರಥಮ, ದ್ವಿತಿಯಾ, ತೃತಿಯ ಪ್ರಶಸ್ತಿಗಳು ಪಡೆದಿವೆ. ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಪುನೀತ್ ರಾಜ್ ಕುಮಾರ್ ನಟನೆಯ ರಾಜಕುಮಾರ ಆಯ್ಕೆಯಾಗಿದೆ.
karnataka cinema state award 2017