Shivakumar Sharma : ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
ಸಂಗೀತ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಅವರು ಮಂಗಳವಾರ ವಿಧಿವಶರಾದರು.. 6 ತಿಂಗಳಿನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 84 ವರ್ಷದ ಶಿವಕುಮಾರ್ ಅವರು ಡಯಾಲಿಸಿಸ್ ಪಡೆಯುತ್ತಿದ್ದವರು ಹೃದಯಾಘಾತದಿಂದ ನಿಧನರಾದರು.
ಬುಧವಾರ ಮಧ್ಯಾಹ್ನ ಮುಂಬೈನಲ್ಲಿ ಶಿವಕುಮಾರ್ ಶರ್ಮಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಅವರ ಪತ್ನಿ ಮನೋರಮಾ, ಪುತ್ರರಾದ ರಾಹುಲ್ ಮತ್ತು ರೋಹಿತ್ ಮತ್ತು ದೀರ್ಘ ಕಾಲದ ಸಹಯೋಗಿ ಪಂಡಿತ್ ಹರಿ ಪ್ರಸಾದ್ ಚೌರಾಸಿಯಾ ಮತ್ತು ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಸೇರಿದಂತೆ ಬಂಧುಬಳಗದ ಸ್ನೇಹಿತರು ಅಂತಿಮ ವಿಧಿವಿಧಾನಗಳಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಶಬಾನಾ ಅಜ್ಮಿ, ಗೀತರಚನೆಕಾರ ಜಾವೇದ್ ಅಖ್ತರ್, ಸಂಗೀತ ಸಂಯೋಜಕ ಜೋಡಿ ಜತಿನ್-ಲಲಿತ್ ಮತ್ತು ಗಾಯಕಿ ಇಲಾ ಅರುಣ್ ಸೇರಿದಂತೆ ಹಲವಾರು ಗಣ್ಯರು ಸಂಗೀತಗಾರನ ಮನೆಗೆ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ಜನವರಿ 13, 1938 ರಂದು ಜನಿಸಿದ ಪಂಡಿತ್ ಶಿವಕುಮಾರ್ ಶರ್ಮಾ ಅವರು ತಮ್ಮ 13 ನೇ ವಯಸ್ಸಿನಲ್ಲಿ ಸಂತೂರ್ ಕಲಿಯಲು ಪ್ರಾರಂಭಿಸಿದರು. ಅವರು 1955 ರಲ್ಲಿ ಮುಂಬೈನಲ್ಲಿ ತಮ್ಮ ಮೊದಲ ಪ್ರದರ್ಶನ ನೀಡಿದರು. ಒಂದು ವರ್ಷದ ನಂತರ ಅವರು ‘ಜನಕ್ ಝನಕ್ ಪಾಯಲ್ ಬಜೆ’ ಚಿತ್ರದ ಒಂದು ದೃಶ್ಯಕ್ಕೆ ಹಿನ್ನೆಲೆ ಸಂಗೀತ ಸಂಯೋಜಿಸಿದರು.
ಜಮ್ಮುವಿನಲ್ಲಿ ಜನಿಸಿದ ಪಂಡಿತ್ ಶಿವಕುಮಾರ್ ಶರ್ಮಾ ಅವರು ಸಂಗೀತ ನಿರ್ದೇಶಕರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಇವರು ತಮ್ಮ 13ನೇ ವಯಸ್ಸಿನಲ್ಲಿಯೇ ಸಂತೂರ್ ನುಡಿಸುವುದನ್ನು ಕಲಿಯಲು ಪ್ರಾರಂಭಿಸಿದರು. 1955ರಲ್ಲಿ ಮೊದಲ ಬಾರಿಗೆ ಮುಂಬೈನಲ್ಲಿ ಸಾರ್ವಜನಿಕವಾಗಿ ಸಂತೂರ್ ಪ್ರದರ್ಶನ ನೀಡುವ ಮೂಲಕ ಜನಮ ಗೆದ್ದಿದ್ದರು..
ಶಿವಕುಮಾರ್ ಶರ್ಮಾ ಅವರು 1956ರ ಝಣಕ್ ಝಣಕ್ ಪಾಯಲ್ ಬಜೆ ಚಿತ್ರದ ಒಂದು ದೃಶ್ಯಕ್ಕೆ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ. ನಾಲ್ಕು ವರ್ಷಗಳ ನಂತರ ಶಿವಕುಮಾರ್ ಶರ್ಮಾ ಮೊದಲ ಬಾರಿಗೆ ಒಬ್ಬರೇ ಆಲ್ಬಂ ರೆಕಾರ್ಡ್ ಮಾಡಿದರು. 1991 ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಮತ್ತು 2001 ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು..