ನಾಗಚೈತನ್ಯ ಜೊತೆಗೆ ತಮ್ಮ ನಾಲ್ಕು ವರ್ಷದ ದಾಂಪತ್ಯಕ್ಕೆ ಇತಿಶ್ರೀ ಹಾಡಿದ ಟಾಲಿವುಡ್ ನ ಕ್ಯೂಟ್ ಬ್ಯೂಟಿ ಸಮಂತಾ ,, ಬೋಲ್ಡ್ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.. ಗ್ಲಾಮರಸ್ ಆಗೂ ಅಭಿಮಾನಿಗಳ ಹಾರ್ಟ್ ಗೆ ಬೆಂಕಿ ಇಡ್ತಾರೆ.. ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಿರುವ ಸ್ಯಾಮ್ ಸೋಷಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಆಕ್ಟೀವ್..
10 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಟಾಲಿವುಡ್ ನ ಸ್ಟಾರ್ ಕಪಲ್ ಸಮಂತಾ ನಾಗಚೈತನ್ಯ ಕೆಲ ತಿಂಗಳುಗಳ ಹಿಂದಷ್ಟೇ ಡಿವೋರ್ಸ್ ಪಡೆದಿದ್ದು ತಮ್ಮ ನಾಲ್ಕು ವರ್ಷಗಳ ದಾಂಪತ್ಯಕ್ಕೆ ಇತಿಶ್ರೀ ಹಾಡಿದ್ದಾರೆ..
ಇವರ ಡಿವೋರ್ಸ್ ಸುದ್ದಿಯಿಂದ ಅಭಿಮಾನಿಗಳು ಸಿಕ್ಕಾಪಟ್ಟೆ ಶಾಕ್ ಆಗಿದ್ದರು.. ಇವರಿಬ್ಬರೂ ಸಹ ಈ ವಿಚಾರವಾಗಿ ಮೌನವಾಗಿದ್ರೂ ನೆಟ್ಟಿಗರು ಸೈಲೆಂಟ್ ಇರಲ್ಲ.. ಈವರೆಗೂ ಇಬ್ಬರ ಅಭಿಮಾನಿಗಳೂ ಪರಸ್ಪರರನ್ನ ಟ್ರೋಲ್ ಮಾಡ್ತಾ ಬಂದಿದ್ದಾರೆ.. ಇಬ್ಬರೂ ಸದ್ಯ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ..
ಆದ್ರೆ ಸಮಂತಾ ಶಾರುಖ್ ಖಾನ್ ಜೊತೆಗೆ ನಟಟಿಸುವ ಅವಕಾಶವನ್ನ ತಿರಸಸ್ಕರಿಸಿದ್ದಾರಂತೆ.. ಶಾರುಖ್ ಖಾನ್ರ ಮುಂದಿನ ಸಿನಿಮಾಕ್ಕೆ ಜವಾನ್ ಎಂದು ಹೆಸರಿಡಲಾಗಿದ್ದು, ಸಿನಿಮಾವನ್ನು ತಮಿಳಿನ ಜನಪ್ರಿಯ ಯುವ ನಿರ್ದೇಶಕ ಅಟ್ಟಿಲಿ ನಿರ್ದೇಶನ ಮಾಡುತ್ತಿದ್ದಾರೆ.
ಸಿನಿಮಾಕ್ಕೆ ನಾಯಕಿಯಾಗಿ ನಯನತಾರಾ ಆಯ್ಕೆ ಆಗಿದ್ದಾರೆ. ಆದರೆ ಮೊದಲಿಗೆ ಈ ಅವಕಾಶ ಸಮಂತಾಗೆಎ ಸಿಕ್ಕಿತ್ತಂತೆ.. ಸಮಂತಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು , ಕಾಲ್ ಶೀಟ್ ನೀಡಲು ಸಮಯವಿಲ್ಲದ ಕಾರಣ ಶಾರುಖ್ ಖಾನ್ ಸಿನಿಮಾವನ್ನ ತಿರಸ್ಕರಿಸಿದ್ದಾರೆ ಎನ್ನಲಾಗಿದೆ..
ಸಮಂತಾ ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಿದ್ದಾರೆ.. ಬಾಲಿವುಡ್ ಹಾಲಿವುಡ್ ಗೆ ಪಾದಾರ್ಪಣೆ ಮಾಡ್ತಿದ್ದಾರೆ.. ಪ್ರಸ್ತುತ ‘ಯಶೋಧಾ’ ಚಿತ್ರದಲ್ಲಿ ಸಮಂತಾ ಬ್ಯುಸಿಯಿದ್ದಾರೆ.. ಈ ಸಿನಿಮಾದಲ್ಲಿ ಸಮಂತಾ ಸಖತ್ ಆಕ್ಷನ್ ಸೀನ್ಸ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.. ಸ್ಟಂಟ್ ಸೀನ್ ಗಳನ್ ಮಾಡಲಿದ್ದಾರೆ ಎನ್ನಲಾಗ್ತಿದೆ..
‘ಯಶೋದಾ’ ಚಿತ್ರವನ್ನು ಶ್ರೀದೇವಿ ಮೂವೀಸ್ ಅಡಿಯಲ್ಲಿ ನಿರ್ಮಾಣ ಮಾಡಲಾಗ್ತಿದೆ.. ಚೊಚ್ಚಲ ನಿರ್ದೇಶಕರಾದ ಹರಿ-ಹರೀಶ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಶಿವಲೆಂಕ ಕೃಷ್ಣ ಪ್ರಸಾದ್ ನಿರ್ಮಿಸಿರುವ ಯಶೋದಾ ಚಿತ್ರದಲ್ಲಿ ತಮಿಳು ನಟಿ ವರಲಕ್ಷ್ಮಿ ಶರತ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.. ಈ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿಯಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ ಎಂಬ ಮಾಹಿತಿ ಸಿಕ್ಕಿದೆ.. ಸದ್ಯಕ್ಕೆ ಹಾಲಿವುಡ್ ಗೂ ಪಾದಾರ್ಪಣೆ ಮಾಡಲು ಸಮಂತಾ ತಯಾರಿ ನಡೆಸುತ್ತಿದ್ದಾರೆ..
ಜೊತೆಗೆ ವಿಜಯ್ ದೇವರಕೊಂಡ ಜೊತೆಗೆ ಖುಷಿ ಸಿನಿಮಾದಲ್ಲಿ ಬ್ಯುಸಿಯಾಗಿರೋ ನಟಿ ಕಾಶ್ಮೀರದಲ್ಲಿ ಶೂಟಿಂಗ್ ಗಾಗಿ ಬೀಡುಬಿಟ್ಟಿದ್ದು , ಮುಂದೆ ತಾಪ್ಸಿ ಜೊತೆಗೂ ಸಿನಿಮಾ ಮಾಡಲಿದ್ದಾರೆ..