ಬಾಲಿವುಡ್ ನಟಿ ಕಂಗನಾ ರಣೌತ್ ಹಾಗೂ ವಿವಾದಗಳಿಗೆ ಒಂದು ಅವಿನಾಭಾವ ಸಂಬಂಧವಿದೆ. ವಿವಾದಗಳೇ ಕಂಗನಾರನ್ನ ಬಿಟ್ರೂ ವಿವಾದಗಳು ಕಂಗನಾ ಬೆನ್ನು ಬಿಡಲ್ಲ.. ಎಷ್ಟು ಒಳ್ಳೆ ನಟಿ ಎಂಬ ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೋ ಅದಕ್ಕಿಂತ 100 ಪಟ್ಟು ವಿವಾದಗಳ ಮೂಲಕವೇ , ಸದಾ ಏನಾದ್ರೂ ಒಂದು ವಿಚಾರವನ್ನ , ಯಾರದರೂ ಒಬ್ರನ್ನ ವಿರೋಧಿಸುತ್ತಲೇ , ನೇರವಾಗಿ ಮಾತನಾಡ್ತಾ ದಿಟ್ಟತನ ಪ್ರದರ್ಶಿಸುವ ನಟಿ..
ಮಹಾರಾಷ್ಟ್ರದ ನೂತನ ಸಿಎಂ ಅವರನ್ನ ಹೊಗಳಿದ ಕಂಗಾನ, ವಿವೇಕ್ ಆಗ್ನಿಹೋತ್ರಿ… ಮಹಾರಾಷ್ಟ್ರದ ನೂತನ ಸಿಎಂ ಅವರನ್ನ ಹೊಗಳಿದ ಕಂಗಾನ, ವಿವೇಕ್ ಆಗ್ನಿಹೋತ್ರಿ…
ಇದೀಗ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಏಕನಾಥ್ ಶಿಂಧೆ ಅವರನ್ನು ಬಾಲಿವುಡ್ ನಟಿ ಕಂಗನಾ ರಣಾವತ್ ಅಭಿನಂದಿಸಿದ್ದಾರೆ. ಶಿವಸೇನೆಯ ಉದ್ಧವ್ ಠಾಕ್ರೆ ಸರ್ಕಾರದ ವಿರುದ್ಧ ಕಂಗನಾ ಅಸಮಾಧಾನ ವ್ಯಕ್ತಪಡಿಸುತ್ತಿದ್ದದ್ದು ಎಲ್ಲರಿಗೂ ಗೊತ್ತೇ ಇದೆ.
ಇದರ ಜೊತೆಗೆ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ಟ್ವೀಟ್ ಮಾಡುವ ಮೂಲಕ ಮಹಾರಾಷ್ಟ್ರದ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಜನ ಈಗ ನಿರ್ಭಯವಾಗಿ ಬದುಕಬಹುದು ಎಂದು ಬರೆದುಕೊಂಡಿದ್ದಾರೆ.
ಕಂಗನಾ ರಣಾವತ್ ಇನ್ಸ್ಟಾಗ್ರಾಮ್ನಲ್ಲಿ ಏಕನಾಥ್ ಶಿಂಧೆಯ ಪೋಟೋ ಹಂಚಿಕೊಂಡದು “ಎಂಥಹ ಸ್ಪೂರ್ತಿದಾಯಕ ಯಶೋಗಾಥೆ… ಆಟೋ ರಿಕ್ಷಾ ಓಡಿಸುವುದರಿಂದ ಹಿಡಿದು ದೇಶದ ಪ್ರಮುಖ ಮತ್ತು ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗುವವರೆಗೆ… ಅಭಿನಂದನೆಗಳು ಸರ್. ಎಂದು ಪೋಸ್ಟ್ ಮಾಡಿದ್ದಾರೆ.
ಮತ್ತೊಂದೆಡೆ, ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿ “ಅಭಿನಂದನೆಗಳು ಏಕನಾಥ್ ಶಿಂಧೆ, ಕ್ರಿಯಾತ್ಮಕ ನಾಯಕತ್ವಕ್ಕಾಗಿ ದೇವೇಂದ್ರ ಫಡ್ನವಿಸ್ ಅವರಿಗೆ ಅಭಿನಂದನೆಗಳು. ಈಗ ಕನಿಷ್ಠ ನಾವು ಭಯವಿಲ್ಲದೆ ಬದುಕಬಹುದು. ಜೈ ಮಹಾರಾಷ್ಟ್ರ ಎಂದು ಬರೆದುಕೊಂಡಿದ್ದಾರೆ.
ನಟಿ ಕಂಗನಾ 2020 ರಲ್ಲಿ ಹೇಳಿಕೆ ನೀಡಿದ್ದ ಗುರುವಾರ ಹಂಚಿಕೊಂಡಿದ್ದಾರೆ. 2020 ರಲ್ಲಿ, ಕಂಗನಾ ಅವರ ಮುಂಬೈ ಕಚೇರಿಯನ್ನು ಅಕ್ರಮ ನಿರ್ಮಾಣ ಎಂದು BMC ಕೆಡವಿಹಾಕಿತ್ತು. ಇದಾದ ಬಳಿಕಾ ಕಂಗನಾ ಉದ್ಧವ್ ಠಾಕ್ರೆಗೆ ಶಾಪ ಹಾಕಿದ್ದರು. ಇವತ್ತು ನನ್ನ ಮನೆ ಒಡೆದಿದೆ, ನಾಳೆ ನಿನ್ನ ಗರ್ವ ಮುರಿಯುತ್ತದೆ ಎಂದಿದ್ದರು. ಅದೇ ವೀಡಿಯೋವನ್ನ ಕಂಗನಾ ಶೇರ್ ಮಾಡಿ “ಪಾಪ ಹೆಚ್ಚಾದಾಗ ನಾಶವಾಗಲೇಬೇಕು” ಎಂದು ಬರೆದುಕೊಂಡಿದ್ದಾರೆ.