ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ‘ಜೇಮ್ಸ್’ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅನಾರೋಗ್ಯದಿಂದ ಇತ್ತೀಚೆಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದು , ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಕೋಮಾದಲ್ಲಿದ್ದಾರೆ. ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಇಂದು ಅವರು ತುಸು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ ಬಿಪಿ ಹೆಚ್ಚಾದ ಕಾರಣದಿಂದಾಗಿ ಅವರು ಪ್ರಜ್ಞೆ ತಪ್ಪಿದ್ದರು ಎನ್ನಲಾಗಿದೆ. ಕೂಡಲೇ ಬೆಂಗಳೂರಿನ ಶೇಷಾದ್ರಿ ಪುರಂ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು , ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ ಎಂದಿದ್ದಾರೆ ವೈದ್ಯರು..
ಬಿಪಿ ಹೆಚ್ಚಾದ ಜೊತೆಗೆ ಅವರಿಗೆ ಸ್ಟ್ರೋಕ್ ಕೂಡ ಆಗಿದೆ ಎಂದು ಹೇಳಲಾಗಿತ್ತು.. ನಿನ್ನೆ ರಾತ್ರಿಯೇ ಅವರಿಗೆ ಬಿಪಿ ಹೆಚ್ಚಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಾಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಆಪ್ತರು ತಿಳಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿರುವ ಕಿಶೋರ್ ಪತ್ತಿಕೊಂಡ, ಮೊದಲ ಸಿನಿಮಾದಲ್ಲೇ ಗೆಲುವು ಕಂಡವರು. ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದರು.
ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಕಿಶೋರ್ ಪತ್ತಿಕೊಂಡ ಅವರನ್ನು ದಾಖಲಿಸಲಾಗಿತ್ತು. ಕಿಶೋರ್ ಪತ್ತಿಕೊಂಡ ಅವರಿಗೆ ಮೆದುಳಿನ ಆಪರೇಷನ್ ಆಗಿದ್ದು, ಕಿಶೋರ್ ಪ್ರಾಣಾಪಾಯದಿಂದ ಪಾರಾಗಿದ್ಧಾರೆ ಎನ್ನಲಾಗಿದೆ..