ಡಿ ಬಾಸ್ ನಟನೆಯ ಕ್ರಾಂತಿ ಸಿನಿಮಾದ ಕ್ರಾಂತಿ ಈಗಾಗಲೇ ರಾಜ್ಯದಲ್ಲಿ ಶುರುವಾಗಿಬಿಟ್ಟಿದೆ.. ಒಂದೆಡೆ ಮಾಧ್ಯಮದವರು ಡಿ ಬಾಸ್ ಸಿನಿಮಾವನ್ನ ಬಾಯ್ಕಾಟ್ ಮಾಡುವ ಪ್ಲಾನ್ ನಲ್ಲಿದ್ರೆ ,, ಮತ್ತೊಂದ್ ಕಡೆ ದಾಸನ ಅಭಿಮಾನಿಗಳು ಮೀಡಿಯಾದವರ ಎದುರು ತೊಡೆ ತೊಟ್ಟು ಅದ್ಧೂರಿಯಾಗಿ ಸಿನಿಮಾವನ್ನ ಪ್ರಮೋಷನ್ ಮಾಡ್ತಾ ಇದ್ದಾರೆ..
ಫ್ಯಾನ್ಸ್ ದಚ್ಚು ಸಿನಿಮಾವನ್ನ ರಾಜ್ಯಾದ್ಯಂತ ಸಖತ್ ಅದ್ಧೂರಿಯಾಗಿಯೇ ರಾಜಾರೋಷವಾಗಿ ಪ್ರಚಾರ ಮಾಡ್ತಾ ಇದ್ದಾರೆ.. ಈಗಿನಿಂದಲೇ ರಾಜ್ಯದಲ್ಲಿ ಕ್ರಾಂತಿ ಜಾತ್ರೆ ಶುರುವಾಗಿಬಿಟ್ಟಿದೆ.. ಈಗಾಗಲೇ ಸಿನಿಮಾದ ಥೀಮ್ ಪೋಸ್ಟರ್, ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿ ಕುತೂಹಲ ಹೆಚ್ಚಿಸಿದೆ..
ಸಿನಿಮಾ ತಂಡವು ಕೊನೆಯ ಹಂತದ ಶೂಟಿಂಗ್ ಗಾಗಿ ಪೋಲ್ಯಾಂಡ್ ನಲ್ಲಿದೆ..
ವಿ. ಹರಿಕೃಷ್ಣ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳೋದರ ಜೊತೆಗೆ ಮ್ಯೂಸಿಕ್ ಕಂಪೋಸ್ ಮಾಡ್ತಿದ್ದಾರೆ. ರಚಿತಾ ರಾಮ್ ನಾಯಕಿಯಾಗಿದ್ದಾರೆ… ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಸಿನಿಮಾ ರಿಲೀಸ್ ಆಗಲಿದೆ..
ಇನ್ನು ಸಿನಿಮಾದ ಕೆಲವು ಭಾಗವ ಚಿತ್ರೀಕರಣ ಮಾತ್ರವೇ ಬಾಕಿ ಇದ್ದು, ಸಾಂಗ್ ಚಿತ್ರೀಕರಣಕ್ಕಾಗಿ ಸಿನಿಮಾತಂಡ ಸದ್ಯ ವಿದೇಶಕ್ಕೆ ಹಾರಿದೆ.
ಇದೀಗ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮ್ಯಾಕ್ಲೂರಹಳ್ಳಿ ಗ್ರಾಮದ ಶ್ರೀ ಬಾಲಕೃಷ್ಣ ಸ್ವಾಮಿ ಹಾಗೂ ಶ್ರೀ ರಂಗನಾಥ ಸ್ವಾಮಿಯ ದೇವರಿಗೆ ಕುರಿ ಕರೆಯುವ ಮೂಲಕ ಏಕಾದಶಿ ಹಬ್ಬ ಬಹಳ ವಿಜೃಂಭಣೆಯಿಂದ ನೆರವೇರಿತು. ಗ್ರಾಮದ ಕುರಿಗಾಹಿ ಯುವಕರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳಾಗಿದ್ದು, ಕುರಿಗಾಹಿಗಳು ತನ್ನ ಇಷ್ಟದ ಕುರಿಗಳ ಮೇಲೆ ಡಿ.ಬಾಸ್, ಕಾಂತ್ರಿ, ದರ್ಶನ್ ಈಗೆ ಹೆಸರು ಬರೆದು ದೇವರ ಸುತ್ತ ಪ್ರದಕ್ಷಿಣೆ ಹಾಕಿಸಿದ್ದಾರೆ.. ಈ ಮೂಲಕ ತಮ್ಮ ಅಭಿಮಾನ ಮೆರೆದಿದ್ದು , ಫೋಟೋಗಳು ಸೋಷಿಯಲ್ ಮೀಡಿಯಾದಲಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.. ಅಂದ್ಹಾಗೆ ಈ ಸಿನಿಮಾದಲ್ಲಿ ದರ್ಶನ್ ಅವರು NRI ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ..