ಬೆಳಗಾವಿ : ಕನ್ನಡದ ನಟ ಶಿವರಂಜನ್ ಬೋಳ್ಳಣ್ಣವರ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ..
ಹನುಮಾನ್ ದೇವಸ್ಥಾನದ ಬಳಿ ಕೆಲವು ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೂರದಿಂದ ಮೂರು ಸುತ್ತು ಗುಂಡು ಹಾರಿಸಿದ್ದಾರೆ.
ಈ ಬಗ್ಗೆ ನಟ , ಉದ್ಯಮಿ ಶಿವರಂಜನ್ ಅವರೇ ಖುದ್ದು ಮಾತನಾಡಿದ್ದಾರೆ… ನಮ್ಮ ಸಹೋದರ ಮತ್ತು ಆತನ ಪತ್ನಿ ಅಕ್ಕನ ಮಗನಿಂದಲೇ ನನ್ನ ಮೇಲೆ 5 ಸುತ್ತು ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಅದೃಷ್ಟವಶಾತ್ ಬದುಕುಳಿದಿದ್ದೇನೆ ಎಂದು ಹೇಳಿಕೊಂಡಿದ್ದಾರೆ..
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುರುಹಿರಿಯರು ಹಾಗೂ ಸ್ನೇಹಿತರ ಆಶೀರ್ವಾದದಿಂದ ನಾನು ಬದುಕಿದ್ದೇನೆ. ನಿನ್ನೆ ಸಂಜೆ 7.30ರ ಸುಮಾರಿಗೆ ನನ್ನ ಮೇಲೆ ಸಂಬಂಧಿಕರರಿಂದಲೇ ಗುಂಡಿನ ದಾಳಿ ಆಗಿದೆ.
ನಮ್ಮ ಸಹೋದರ ಮತ್ತು ಆತನ ಹೆಂಡತಿ ಅಕ್ಕನ ಮಗ ಸೇರಿ ನನ್ನ ಮೇಲೆ 5 ಸುತ್ತು ಗುಂಡಿನ ದಾಳಿ ಮಾಡಿದ್ದಾರೆ. ಅದೃಷ್ಟವಶಾತ್ ನನಗೆ ಯಾವುದೇ ಗುಂಡು ತಗುಲಿಲ್ಲ. ಆದರೆ ಇಂತಹ ಘಟನೆಗಳು ಸಮಾಜದಲ್ಲಿ ನಡೆಯಬಾರದು. ಇದನ್ನ ನಾನು ಖಂಡಿಸುತ್ತೇನೆ ಎಂದಿದ್ದಾರೆ..
ಅಲ್ಲದೇ ಈಗಾಗಲೇ ಓರ್ವ ಆರೋಪಿಯನ್ನು ಪೊಲೀಸರು ನಿನ್ನೆಯೇ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಯನ್ನು ಇಂದು ಬಂಧಿಸುವ ಭರವಸೆಯನ್ನೂ ಪೊಲೀಸರು ನೀಡಿದ್ದಾರೆ ಎಂದರು.
50 ವರ್ಷ ವಯಸ್ಸಿನ ಇವರು ಬಹಳ ಹಿಂದೆಯೇ ಸಿನಿಮಾರಂಗದಿಂದ ನಿವೃತ್ತಿ ಪಡೆದಿದ್ದರು.. ಪ್ರಸ್ತುತ ಉದ್ಯಮದಲ್ಲಿ ತೊಡಗಿದ್ದರು.. ಇವರು ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಅಮೃತ ಸಿಂಧು ಚಿತ್ರದಲ್ಲಿ ನಟಿ ಶ್ರುತಿ ಎದುರು ಜೋಡಿಯಾಗಿದ್ದರು. ವೀರಭದ್ರ ಹಾಗೂ ಇತರ ಸಿನಿಮಾಗಳಲ್ಲೂ ನಟಿಸಿದ್ದಾರೆ.