ಭಾರತದ ಒನ್ ಆಫ್ ದ ಮೋಸ್ಟ್ ಆಂಟಿಸಿಪೇಟೆಡ್ , ಹಾಲಿವುಡ್ ರೇಂಜ್ ಗೆ ಸೌಂಡ್ ಮಾಡ್ತಿರುವ ಕನ್ನಡದ “ ಪ್ಯಾನ್ ವರ್ಲ್ಡ್ “ ಸಿನಿಮಾ ಅಂದ್ರೆ ಅದು ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ..
ಈ ಸಿನಿಮಾ ಜುಲೈ 28 ಕ್ಕೆ ವಿಶ್ವಾದ್ಯಂತ ಸುಮಾರು 14 ಕ್ಕೂ ಹೆಚ್ಚು ಭಾಷೆಗಳಲ್ಲಿ 3ಡಿಯಲ್ಲಿ ರಿಲೀಸ್ ಆಗ್ತಿದೆ.. ಫ್ಯಾಂಟಸಿ ಥ್ರಿಲ್ಲರ್ ಸಿನಿಮಾಗಾಗಿ ಜನರು ಸಖತ್ ಎಕ್ಸೈಟ್ ಆಗಿದ್ದಾರೆ..
ಕಿಚ್ಚ ಸುದೀಪ್ ಅಂಡ್ ಟೀಮ್ ಸದ್ಯ ಬಹುದಿನಗಳಿಂದ ಪ್ರಚಾರದಲ್ಲಿ ತೊಡಗಿದ್ದಾರೆ…
ಆದ್ರೆ ಇತತ್ತೀಚೆಗೆ ಕಿಚ್ಚ ಸುದೀಪ್ ಅವರು ಸೋಷಿಯಲ್ ಮೀಡಿಯಾ ಮೂಲಕ ಮಾಧ್ಯಮದವರ ಬಳಿ ಕ್ಷಮೆಯಾಚಿಸಿದ್ದಾರೆ..
ಅಂದ್ಹಾಗೆ ನಟ ಸುದೀಪ್ ಅವರು ಕೆಲ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರಂತೆ. ಈ ಬಗ್ಗೆ ಅವರೇ ಬಹಿರಂಗಪಡಿಸಿದ್ದಾರೆ. ಅನಾರೋಗ್ಯದ ಕಾರಣದಿಂದಲೇ ಹಲವು ಕಾರ್ಯಕ್ರಮಗಳನ್ನ ರದ್ದುಗೊಳಿಸಿದ್ದಾರೆ.. ಹೀಗಾಗಿ ಕ್ಷಮೆಯಾಚಿಸಿದ್ದಾರೆ..
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿರುವ ನಟ ” ವಿಕ್ರಾಂತ್ ರೋಣ ಚಿತ್ರದ ಸುದ್ದಿಗೋಷ್ಟಿ ಮತ್ತು ಕಾರ್ಯಕ್ರಮ ರದ್ದಾಗಿರುವುದಕ್ಕೆ, ಚೆನ್ನೈ, ಕೊಚ್ಚಿ, ಹೈದರಾಬಾದ್ ಮಾಧ್ಯಮ ಸ್ನೇಹಿತರಲ್ಲಿ ಕ್ಷಮೆಯಾಚಿಸುತ್ತೇನೆ. ನನ್ನ ಆರೋಗ್ಯ ಸರಿಯಿಲ್ಲ. ನಾನು ಸ್ವಲ್ಪ ಚೇತರಿಕೊಂಡ ಬಳಿಕ ಮತ್ತೆ ಎಲ್ಲವನ್ನು ಶುರು ಮಾಡೋಣ. ಸದ್ಯದಲ್ಲೇ ಹೊಸ ದಿನಾಂಕ ಪ್ರಕಟ ಮಾಡಲಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.