Saturday, January 28, 2023
  • ಸಿನಿ ಕಾರ್ನರ್
  • ಚಂದನವನ
  • ಕೋಸ್ಟಲ್ ವುಡ್
  • ಬಾಲಿವುಡ್
  • ಟಾಲಿವುಡ್
  • ಕಾಲಿವುಡ್
  • ವಿಮರ್ಶೆ
  • ಮಾಲಿವುಡ್
  • More
    • ಟಿ ವಿ
    • ವಿಶೇಷ
    • ಗ್ಯಾಲರಿ
Cini Bazaar
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
Cini Bazaar
No Result
View All Result
Home ಚಂದನವನ

Darshan : ಅಪ್ಪು – ದರ್ಶನ್ ಫ್ಯಾನ್ಸ್ ನಡುವೆ ವಾರ್ : ದರ್ಶನ್ ಕ್ಷಮೆ ಕೇಳುವಂತೆ ಅಪ್ಪು ಫ್ಯಾನ್ಸ್ ಪಟ್ಟು..!!!

Namratha Rao by Namratha Rao
August 9, 2022
in ಚಂದನವನ, ಸಿನಿ ಕಾರ್ನರ್
0
Darshan - puneeth rajkumar
Share on FacebookShare on TwitterShare on WhatsApp

ಒಂದೆಡೆ ರಾಜ್ಯಾದ್ಯಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕ್ರಾಂತಿ ಜಾತ್ರೆ ಶುರು ಮಾಡಿದ್ದಾರೆ..  ಕ್ರಾಂತಿ ಸಿನಿಮಾದ ಶೂಟಿಂಗ್ ಮುಗಿದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಸಿನಿಮಾದ ಪ್ರಚಾರದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದೆ..

ಈ ನಡುವೆ ಡಿ ಬಾಸ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ಕೊಂಚ ಅಸಮಾಧಾನ ಮೂಡಿದೆ..   ಹೌದು..! ಸೋಷಿಯಲ್ ಮೀಡಿಯಾದಲ್ಲಿ ಡಿ ಬಾಸ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ಕಿತ್ತಾಟ ಹೆಚ್ಚಾಗ್ತಲೇ ಇದೆ..

ದರ್ಶನ್ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಪುನೀತ್ ರಾಜ್‌ ಕುಮಾರ್ ಅವರ ಬಗ್ಗೆ ಮಾತಾಡಿದ್ದರು. “ಸಹಜವಾಗಿ ನಾವು ಸತ್ತಮೇಲೆ ನೋಡಿದ್ದೇವೆ. ಫ್ಯಾನ್ಸ್ ಗಳು ಅಂದ್ರೆ ಹೇಗೆ ಎಂದು ಪುನೀತ್ ರಾಜ್‌ ಕುಮಾರ್ ಒಬ್ಬರದ್ದೇ ಸಾಕು. ಆದರೆ, ನಾನು ಬದುಕಿದ್ದಾಗಲೇ ಫ್ಯಾನ್ಸ್ ಗಳು ತೋರಿಸಿ ಬಿಟ್ಟರಲ್ಲ ನನಗೆ ಅಷ್ಟೇ ಸಾಕು  ಎಂದು ದರ್ಶನ್ ಹೇಳಿದ್ದರು.

ದರ್ಶನ್ ಅವರ ಈ ಹೇಳಿಕೆ ಅಪ್ಪು  ಅಭಿಮಾನಿಗಳನ್ನ ಕೊಂಚ ಕೆರಳಿಸಿಬಿಟ್ಟಿದೆ.  ದರ್ಶನ್ ಕ್ಷಮೆ ಕೇಳ ಬೇಕೆಂದು ಪುನೀತ್ ರಾಜ್ ಕುಮಾರ್ ಫ್ಯಾನ್ಸ್ ಪಟ್ಟುಹಿಡಿದಿದ್ದಾರೆ..   ಹೀಗೆ ಪರಸ್ಪರ ಇಬ್ಬರೂ ಸ್ಟಾರ್ ಗಳ ಫ್ಯಾನ್ ಗಳ ವಾರ್ ಮುಂದುವರೆದಿದೆ.. ಡಿ ಬಾಸ್ ಸೋಲ್ಜರ್ ಅನ್ನೋ ಫ್ಯಾನ್ ಪೇಜ್‌ ನಲ್ಲಿ ಪುನೀತ್ ರಾಜ್‌ಕುಮಾರ್ ಫ್ಯಾನ್ಸ್ ಬಗ್ಗೆ ಅವಹೇಳಕಾರಿಯಾಗಿ ನಿಂದಿಸಲಾಗಿತ್ತು. ಈ ಫ್ಯಾನ್ ಪೇಜ್ ವಿರುದ್ಧ ಪುನೀತ್ ಅಭಿಮಾನಿಗಳು ತಿರುಗಿಬಿದ್ದಿದ್ದರು.  ಇದೀಗ ಡಿ ಬಾಸ್ ಸೋಲ್ಜರ್ ಪೇಜ್ ಡಿಲೀಟ್ ಆಗಿದೆ ಎಂದು ಪುನೀತ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹೇಳುತ್ತಿದ್ದಾರೆ..

ಇತ್ತ ದಾಸನ ಅಭಿಮಾನಿಗಳು  ದರ್ಶನ್ ಅವರ ಹೇಳಿಕೆಯನ್ನ ತಿರುಚಲಾಗಿದೆ ಎಂದು ವಾದ ಮಾಡುತ್ತಾ ತಮ್ಮ  ನೆಚ್ಚಿನ ನಟನ ಬೆಂಬಲಕ್ಕೆ ನಿಂತಿದ್ದಾರೆ.. ಅಲ್ದೇ ಅಪ್ಪು ಬಗ್ಗೆ ದರ್ಶನ್ ಮಾತನಾಡಿರುವ ವಿಡಿಯೋವನ್ನ ಸಹ ವೈರಲ್ ಮಾಡಿದ್ಧಾರೆ.. ಈ ವಿಡಿಯೋದಲ್ಲಿ ಸಂದರ್ಶನದಲ್ಲಿ ಭಾಗಿಯಾಗಿರುವ ದರ್ಶನ್ ,  ಪುನೀತ್ ರಾಜ್‌ಕುಮಾರ್ ಬಗ್ಗೆ ಮಾತಾಡಿದ್ದಾರೆ..  ಕ್ರಾಂತಿ ಸಿನಿಮಾ ರಿಲೀಸ್ ಆಗಿಬಿಡಬೇಕಾಗಿತ್ತು. ಸೆಟ್ ಹಾಕಿದಾಗ ಮಳೆ ಬಂತು. ಆಮೇಲೆ ಪುನೀತ್ ಅವರದ್ದು ಹಂಗಾಯ್ತು. ಪುನೀತ್‌ ಅವರದ್ದು ಆ ತರ ಆದಾಗ ನಾನು ಒಬ್ಬ ಕಲಾವಿದ. ಅವರ ಜೊತೆ ತುಂಬಾ ಒಡನಾಟ ಇಟ್ಟುಕೊಂಡಿದ್ವಿ. ದೊಡ್ಮನೆಯಿಂದ ನಾವೆಲ್ಲಾ ಬಂದವರು.

ಹಂಗೆ ಆದ ತಕ್ಷಣ 11 ದಿನ ಮಾಡೋದು ಬೇಡ ಕಣಯ್ಯಾ. ನಮಗೂ ಸೂತಕ ಅದು ಎಂದು ನಾನೇ ಶೂಟಿಂಗ್ ನಿಲ್ಲಿಸಿಬಿಟ್ಟೆ ಎಂದಿರುವ ವಿಡಿಯೋ ಇದಾಗಿದೆ.. ಒಟ್ನಲ್ಲಿ ಈ ಫ್ಯಾನ್ ವಾರ್ ಎಲ್ಲಿಗೆ ಹೋಗಿ ನಿಲ್ಲುತ್ತೋ ಕಾದು ನೋಡ್ಬೇಕಿದೆ..

Tags: cinibazaardarshankranthipuneeth rajkumarSandalwood
ShareTweetSend
Join us on:

Contact

#779, Ground Floor, 11th Block, 4th Cross, Opp St Sophia High School, Papareddy Palya, 2nd Stage, Nagarabhavi, Bengaluru- 560072

Recent Posts

  • KGF 2 : ಫಸ್ಟ್ ಡೇ ಕಲೆಕ್ಷನ್ ಬ್ರೇಕ್ ಮಾಡಿದ ‘ಪಠಾಣ್’…!!!
  • Yash : Pepsi ಜಾಹಿರಾತಿಯಲ್ಲಿ ರಾಕಿ ಭಾಯ್ – ಫ್ಯಾನ್ಸ್ ಬೇಸರ
  • Venky75 : ವಿಕ್ಟರಿ ವೆಂಕಟೇಶ್ ‘ಸೈಂದವ್’ ಚಿತ್ರದ ಫಸ್ಟ್ ಲುಕ್ ಹೇಗಿದೆ..??
  • Rolex : ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ-
  • Swatishta krishnan : ಸ್ಯಾಂಡಲ್ ವುಡ್ ಗೆ ‘ವಿಕ್ರಮ್’ ಬೆಡಗಿ ಸ್ವಾತಿಷ್ಠ ಕೃಷ್ಣನ್ ಎಂಟ್ರಿ..!!
  • About Us
  • Privacy Policy

© 2022 Cini Bazaar - All Rights Reserved | Powered by Kalahamsa Infotech Pvt. ltd.

No Result
View All Result

© 2022 Cini Bazaar - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram