Puneeth Rajkumar : ‘ಪುನೀತ್’ ಉಪಗ್ರಹ ಉಡಾವಣೆಗೆ ಮುಹೂರ್ತ ಫಿಕ್ಸ್…!!
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿ ತಿಂಗಳುಗಳೇ ಕಳೆದಿದೆ.. ಆದ್ರೂ ಅವರ ಅಗಲಿಕೆಯ ನೋವು ಮಾತ್ರ ನ್ನೂ ಮಾಸಿಲ್ಲ.. ಅವರ ಅಭಿಮಾನಿಗಳು ಅಪ್ಪು ಹೆಸರಲ್ಲಿ ನಾನಾ ಸಮಾಜಮುಖಿ ಕಾರ್ಯಗಳನ್ನ ಮಾಡ್ತಿದ್ದು , ಅಭಿಮಾನಿಗಳು ಆಗಾಗ ವಿಭಿನ್ನ ರೀತಿಯಲ್ಲಿ ತಮ್ಮ ಅಭಿಮಾನವನ್ನ ತೋರಿಸಿಕೊಳ್ತಿದ್ದಾರೆ..
ಅಕ್ಬೋಬರ್ ಬಂದರೆ ಅಪ್ಪು ಅಗಲಿ 1 ವರ್ಷ ಕಳೆದುಹೋಗುತ್ತೆ.. ಇದೀಗ ಸರ್ಕಾರವು ಅಪ್ಪುಗೆ ಮತ್ತೊಂದು ರೀತಿಯಲ್ಲಿ ಗೌರವ ಸಲ್ಲಿಸಲು ಮುಂದಾಗಿದೆ.. ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ವಿದ್ಯಾರ್ಥಿಗಳು ನಿರ್ಮಿಸಿರುವ ಉಪಗ್ರಹ ಉಡಾವಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಈ ಉಪಗ್ರಹಕ್ಕೆ ಪುನೀತ್ ರಾಜ್ ಕುಮಾರ್ ಉಪಗ್ರಹವೆಂದು ಹೆಸರು ಕೂಡ ಇಡಲಾಗಿದೆ. ಉಪಗ್ರಹದ ಉಡಾವಣೆಗೆ ಮುಹೂರ್ತ ಇದೀಗ ಫಿಕ್ಸ್ ಆಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ ಪುನೀತ್ ಉಪಗ್ರಹವನ್ನು ನ. 15 ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.,. ಈ ವಿಷಯವನ್ನು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
ಪುನೀತ್ ಉಪಗ್ರಹ ಯೋಜನೆಯ ಪ್ರಗತಿ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಈ ಉಪಗ್ರಹ ಯೋಜನೆಯ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುತ್ತದೆ ಎಂದು ತಿಳಿಸಿದ್ದಾರೆ.