ಕಿರುತೆರೆ ಜನಪ್ರಿಯ ನಟಿ ದಿವ್ಯಾ ಶ್ರೀಧರ್ ಮೇಲೆ ಹಲ್ಲೆ ಪ್ರಕರಣಕ್ಕೆ ಇದೀಗ ಕರ್ನಾಟಕ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದೆ..
ನಟಿಗೆ ಸೂಕ್ತ ನ್ಯಾಯ ಒದಗಿಸಿ ಕೊಡುವಂತೆ ಆಗ್ರಹಿಸಿದೆ..
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಆಗ್ಹಿಸಿದ್ದಾರೆ..
ಈ ಸಂಬಂಧ ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿ ಮೂಲಕವೂ ಮಾತುಕತೆ
ಜೊತೆಗೆ ಲಿಖಿತ ರೂಪದಲ್ಲಿ ಈ ಬಗ್ಗೆ ತಮಿಳು ನಾಡು ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ..
ದಿವ್ಯಾ ಶ್ರೀಧರ್ ತನ್ನ ಗಂಡನಿಂದ ದೈಹಿಕ ಹಲ್ಲೆಗೆ, ಮಾನಸಿಕ ಕಿರಿಕಿರಿಗೆ ಒಳಗಾಗಿದ್ದಾರೆ.
ಗರ್ಭಿಣಿ ಅನ್ನೋದನ್ನು ನೋಡದೇ ಆಕೆಯ ಪತಿ ಹೊಟ್ಟೆಗೆ ಒದ್ದಿದ್ದಾರೆ.
ಈ ಬಗ್ಗೆ ಆಕೆ ಮಾಧ್ಯಮಗಳಲ್ಲಿ ನೀಡಿದ ಪ್ರತಿಕ್ರಿಯೆಯಿಂದ ತಿಳಿದು ಬಂದಿದೆ.
ಆಸ್ಪತ್ರೆಗೆ ದಾಖಲಾಗಿರುವ ಹೆಣ್ಣು ಮಗುವಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಿ ಅಂತಾ ಆಗ್ರಹಿಸಿದ್ಧಾರೆ..