Kantara : ಚೇತನ್ ಹೇಳಿಕೆ ಒಪ್ಪಲು ಸಾಧ್ಯವಿಲ್ಲ – ಆರಗ ಜ್ಞಾನೇಂದ್ರ
ಮೊಸರಲ್ಲಿ ಕಲ್ಲು ಹುಡುಕುವ ಕೆಲಸವೆಂಬಂತೆ ಎಲ್ಲಾ ಭಾಷೆಗಳಲ್ಲೂ ಸೂಪರ್ ಸಕ್ಸಸ್ ಕಾಣುತ್ತಾ , ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿರುವ ರಿಷಬ್ ಶೆಟ್ಟಿ ನಟನೆಯ ನಿರ್ದೇಶನದ ಕಾಂತಾರ ಸಿನಿಮಾ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗ್ತಿರುವ ಹೊತ್ತಲ್ಲಿ , ನಟ ಚೇತನ್ ಅಹಿಂಸಾ ಈ ಸಿನಿಮಾದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ..
ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗವೆಂಬ ರಿಷಬ್ ಶೆಟ್ಟಿ ಹೇಳಿಕೆ ಒಪ್ಪಲು ಸಾಧ್ಯವಿಲ್ಲ.. ಅದು ಹಿಂದೂ ಸಂಸ್ಕೃತಿಗೆ ಸೇರಲ್ಲ ಎಂದಿದ್ದರು.. ಅವರ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು , ಹಲವರು ಖಂಡಿಸಿದ್ದು , ದೂರು ಕೂಡ ದಾಖಲಿಸಲಾಗಿದೆ..
ಅಂದ್ಹಾಗೆ ನಟ ಚೇತನ್ ಸಿನಿಮಾದ ಬಗ್ಗೆ ನೀಡಿರುವ ಹೇಳಿಕೆಯನ್ನ ವಿರೋಧಿಸುತ್ತಾ ತಾವು ಚೇತನ್ ಹೇಳಿಕೆಯನ್ನ ಒಪ್ಪುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಿಡಿಕಾರಿದ್ದಾರೆ..
ಹೌದು..! ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಚೇತನ್ ಹೇಳಿಕೆ ವಿವಾದ ಸೃಷ್ಟಿಸಿದೆ. ಈ ಹೇಳಿಕೆಯನ್ನ ನಾನು ಒಪ್ಪೋದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ..
ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇರುತ್ತೆ.. ಮಾತಾಡಿಕೊಳ್ಳಲಿ ಬೇಕಾದ್ರೆ. ಆದರೆ ಚೇತನ್ ಮಾತನ್ನ ನಾನು ಒಪ್ಪೋದಿಲ್ಲ.. ಕಾಂತಾರ ಸಿನಿಮಾ ನಾನು ನೋಡಿದೆ ತುಂಬಾ ಚೆನ್ನಾಗಿದೆ, ನಮ್ಮ ಮಲೆ ನಾಡಿನ ಸೊಗಡನ್ನ ತೋರಿಸಿದ್ದಾರೆ ಎನ್ನುತ್ತಾ ಸಿನಿಮಾವನ್ನ ಮೆಚ್ಚಿದ್ದಾರೆ..