ಇಂದು ರಾಜ್ಯಾದ್ಯಂತ ಅಷ್ಟೇ ಅಲ್ದೇ ವಿಶ್ವಾದ್ಯಂತ ಅದ್ಧೂರಿಯಾಗಿ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಗಂಧದ ಗುಡಿ ಸಾಕ್ಷ್ಯ ಚಿತ್ರ ರಿಲೀಸ್ ಆಗಿದೆ.. ಅಭಿಮಾನಿಗಳು ಪ್ರೀತಿಯಿಂದ ಅದ್ಧೂರಿಯಾಗಿ ಸಂಭ್ರಮದಿಂದ ಗಂಧದ ಗುಡಿ ಬರಮಾಡಿಕೊಂಡಿದ್ದಾರೆ..
ಈ ಸಿನಿಮಾ ಕರುನಾಡಿಗರು , ಅಭಿಮಾನಿಗಳ ಜೊತೆಗೆ ಭಾವನಾತ್ಮಕವಾಗಿ ಬೆಸೆದುಕೊಂಡಿದೆ.. ಪೇಯ್ಡ್ ಪ್ರೀಮಿಯರ್ ಶೋನಲ್ಲೇ ಬಹುತಯೇಕ ಸ್ಟಾರ್ ಗಳು ಸಿನಿಮಾವನ್ನ ವೀಕ್ಷಿಸಿದ್ದಾರೆ..
ಸೆಲೆಬ್ರಿಟಿಗಳಿಗಾಗಿಯೇ ಆಯೋಜನೆದ ಮಾಡಲಾಗಿದ್ದ ಶೋನಲ್ಲಿ ಹಲವಾರು ಸ್ಟಾರ್ ಗಳು , ತಂತ್ರಜ್ಞರು , ನಿರ್ದೇಶಕ , ನಿರ್ಮಾಕರು , ಸಿನಿಮಾರಂಗದವರು ಸಿನಿಮಾ ವೀಕ್ಷಿಸಿ , ಸೋಷಿಯಲ್ ಮೀಡಿಯಾದಲ್ಲಿ ರಿವ್ಯೂ ಬರೆದುಕೊಂಡಿದ್ದಾರೆ..
ಅಂತೆಯೇ ಮೋಹಕ ತಾರೆ ರಮ್ಯಾ ಕೂಡ ಟ್ವೀಟ್ ಮಾಡಿದ್ದಾರೆ..
ಖಾಸಗಿ ವಾಹಿನಿ ಜೊತೆಗೆ ಮಾತನಾಡಿರುವ ರಮ್ಯಾ ಎಲ್ಲರೂ ಗಂಧದಗುಡಿ ಸಿನಿಮಾ ನೋಡಬೇಕು. ಅಮೂಲ್ಯವಾದ ಜೀವನ ಪಾಠ ಚಿತ್ರದಲ್ಲಿದೆ. ಈ ಸಿನಿಮಾ ನೋಡಿದ ಮೇಲೆ ನಾವೆಲ್ಲರೂ ಬದಲಾಗುತ್ತೇವೆ. ಪ್ರತಿಯೊಬ್ಬರ ಮನಸ್ಸಿನಲ್ಲಿ ಒಂದು ಬದಲಾವಣೆ ಆಗುತ್ತದೆ. ಸಿಎಂ ಬೊಮ್ಮಾಯಿ ಸರ್ ಗೆ ಮನವಿ ಮಾಡುತ್ತೇನೆ ತೆರೆಗೆ ವಿನಾಯಿತಿ ನೀಡುವಂತೆ. ಹೆಚ್ಚು ಜನ ಸಿನಿಮಾ ನೋಡಬೇಕು. ಮುಖ್ಯವಾಗಿ ಮಕ್ಕಳು ನೋಡಬೇಕು. ನನಗೆ ಅಪ್ಪು ಅವರು ವೈಯಕ್ತಿಕವಾಗಿ ಗೊತ್ತು.
ತುಂಬಾ ಜನಕ್ಕೆ ಗೊತ್ತಿರಲ್ಲ. ಗಂಧದ ಗುಡಿ ನೋಡಿದರೆ ನಿಮಗೆ ನಿಜವಾಗಲೂ ಅಪ್ಪು ಯಾರು ಎನ್ನುವುದು ಗೊತ್ತಾಗುತ್ತದೆ ಎಂದಿದ್ದಾರೆ..