ರಾಜ್ಯಾದ್ಯಂತ ಅಷ್ಟೇ ಅಲ್ದೇ ವಿಶ್ವಾದ್ಯಂತ ಅದ್ಧೂರಿಯಾಗಿ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಗಂಧದ ಗುಡಿ ಸಾಕ್ಷ್ಯ ಚಿತ್ರ ರಿಲೀಸ್ ಆಗಿದೆ.. ಅಭಿಮಾನಿಗಳು ಪ್ರೀತಿಯಿಂದ ಅದ್ಧೂರಿಯಾಗಿ ಸಂಭ್ರಮದಿಂದ ಗಂಧದ ಗುಡಿ ಬರಮಾಡಿಕೊಂಡಿದ್ದಾರೆ..
ಈ ಸಿನಿಮಾ ಕರುನಾಡಿಗರು , ಅಭಿಮಾನಿಗಳ ಜೊತೆಗೆ ಭಾವನಾತ್ಮಕವಾಗಿ ಬೆಸೆದುಕೊಂಡಿದೆ.. ಪೇಯ್ಡ್ ಪ್ರೀಮಿಯರ್ ಶೋನಲ್ಲೇ ಬಹುತಯೇಕ ಸ್ಟಾರ್ ಗಳು ಸಿನಿಮಾವನ್ನ ವೀಕ್ಷಿಸಿದ್ದಾರೆ..
ಸೆಲೆಬ್ರಿಟಿಗಳಿಗಾಗಿಯೇ ಆಯೋಜನೆದ ಮಾಡಲಾಗಿದ್ದ ಶೋನಲ್ಲಿ ಹಲವಾರು ಸ್ಟಾರ್ ಗಳು , ತಂತ್ರಜ್ಞರು , ನಿರ್ದೇಶಕ , ನಿರ್ಮಾಕರು , ಸಿನಿಮಾರಂಗದವರು ಸಿನಿಮಾ ವೀಕ್ಷಿಸಿ , ಸೋಷಿಯಲ್ ಮೀಡಿಯಾದಲ್ಲಿ ರಿವ್ಯೂ ಬರೆದುಕೊಂಡಿದ್ದಾರೆ..
ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.. ನಮ್ಮ ಪುನೀತ್ ರಾಜ್ ಕುಮಾರ್ ಅವರನ್ನು ತೆರೆ ಮೇಲೆ ವೀಕ್ಷಿಸಿ ಸಾಕ್ಷಿಯಾಗುವ ಸಮಯವಿದು, ಗಂಧದ ಗುಡಿ ಚಿತ್ರಕ್ಕೆ ಶುಭವಾಗಲಿ, ಇದೊಂದು ಚಿತ್ರವಲ್ಲ ಅನುಭವ ಎಂದು ಟ್ವೀಟ್ ಮಾಡಿದ್ದಾರೆ..