Kantara : ಧರ್ಮಸ್ಥಳ ಧರ್ಮಾಧಿಕಾರಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ದಂಪತಿ..!!
ಕಾಂತಾರ ಹವಾ ಜೋರಾಗಿದೆ..
ರಿಷಬ್ ಶೆಟ್ಟಿ ನಟೆನೆಗೆ ಎಲ್ಲರೂ ಫಿದಾ ಆಗಿದ್ದಾರೆ..
ಧರ್ಮಸ್ಥಳ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರೂ ಸಹ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು..
ಇದೀಗ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಧರ್ಮಸ್ಥಳ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ..
ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಂತರ ಧರ್ಮಸ್ಥಳದ ಧರ್ಮಾಧರಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ..
ಕೆಲ ಕಾಲ ಸಿನಿಮಾ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ಈ ಸಿನಿಮಾ ಮಾಡುವ ಮುನ್ನವೂ ರಿಷಬ್ ಇಲ್ಲಿಗೆ ಭೇಟಿ ನೀಡಿ ವೀರೇಂದ್ರ ಹೆಗ್ಗಡೆಯವರನ್ನು ಸಿನಿಮಾ ಕುರಿತು ಸಲಹೆ ಪಡೆದಿದ್ದರು. ಇದೀಗ ಸಿನಿಮಾದ ಯಶಸ್ಸಿನ ನಂತರ ಮತ್ತೊಮ್ಮೆ ಅವರನ್ನ ಭೇಟಿ ಮಾಡಿದ್ದಾರೆ..