Roopesh Shetty : ಗಡಿನಾಡ ಕನ್ನಡಿಗ ಎಂದ ರೂಪೇಶ್ ಕುಟುಂಬಸ್ಥರಿಗೆ ಬೆದರಿಕೆ..!! ದೂರು ದಾಖಲು
ಪ್ರಶಾಂತ್ ಸಂಬರ್ಗಿ ಕನ್ನಡಪರ ಹೋರಾಟಗಾರರನ್ನ ಅವಹೇಳ ಮಾಡಿದ್ದ ಬೆನ್ನಲ್ಲೇ ಅವರ ವಿರುದ್ಧ ತೀವ್ರ ಪ್ರತಿಭಟನೆ ನಡೆಯಿತು.. ಇದೀಗ ರೂಪೇಶ್ ಶೆಟ್ಟಿ ಹೇಳಿಕೆಯೊಂದು ವಿವಾದ ಹುಟ್ಟುಹಾಕಿದ್ದು , ಶೆಟ್ಟಿ ವಿರುದ್ಧ ಾಕ್ರೋಶ ವ್ಯಕ್ತವಾಗ್ತಿದೆ.. ಅಲ್ಲದೇ ರೂಪೇಶ್ ಕುಟುಂಬಕ್ಕೆ ಬೆದರಿಕೆ ಒಡ್ಡಲಾಗಿದೆ..
ಹೌದು..!
ಒಟಿಟಿಯಲ್ಲಿ ಮಿಂಚಿ ಟಿವಿಯಲ್ಲೂ ಹೈಲೇಟ್ ಆಗ್ತಿರುವ ರೂಪೇಶ್ ಫೈನಲ್ಸ್ ಗೆ ಬರುವ ಸಾಧ್ಯತೆ ಹೆಚ್ಚಾಗಿದೆ..
ಈ ನಡುವೆ ತಾನು ಗಡಿನಾಡಿನ ಕನ್ನಡಿಗ ಎಂದಿರುವ ರೂಪೇಶ್ ಹೇಳಿಕೆ ಭಾರೀ ವಿರೋಧ ವ್ಯಕ್ತವಾಗ್ತಿದೆ..
ಕೆಲವರು ರೂಪೇಶ್ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರೂಪೇಶ್ ವಿರುದ್ಧ ಕಳಪೆ ಕಾಮೆಂಟ್ ಗಳನ್ನೂ ಮಾಡ್ತಿದ್ದು , ಈ ವಿರುದ್ಧ ಇದೀಗ ರೂಪೇಶ್ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ..
ಸಾನ್ಯ ಎಲಿಮಿನೇಷನ್ನಿಂದ ನಂತರ ರೂಪೇಶ್ ಬಿಕ್ಕಿ ಬಿಕ್ಕಿ ಅಳುತ್ತಾ ಸಾನ್ವಿಯನ್ನ ಮಿಸ್ ಮಾಡಿಕೊಳ್ತಿದ್ದರು.. ಇದೀಗ ಕನ್ನಡ ರಾಜ್ಯೋತ್ಸವದ ದಿನ ಮಾತನಾಡುತ್ತಾ ರೂಪೇಶ್, ನಾನು ಗಡಿನಾಡ ಕನ್ನಡಿಗ ಅಂತ ಹೇಳಿ, ತಾನು ಹುಟ್ಟಿ ಬೆಳೆದ ಊರಿನ ಬಗ್ಗೆ ಮಾತನಾಡಿದ್ದರು.
ಆದರೆ ಇದು ಕೆಲ ತುಳು ಪ್ರೇಮಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ತುಳುನಾಡಿನಲ್ಲಿ ಹೆಸರು ಗಳಿಸಿ ಇದೀಗ ಗಡಿನಾಡ ಕನ್ನಡಿಗ ಅಂತ ಹೇಳಿರುವುದು ಅಸಮಾಧಾನಕ್ಕೆ ಕಾರಣವಾಗಿದೆ..
ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಪರ ವಿರೋಧದ ಅಭಿಪ್ರಾಯ ವ್ಯಕ್ತವಾಗಿತ್ತು. ಹಲವು ತುಳುವರು ರೂಪೇಶ್ ಬೆಂಬಲಕ್ಕೆ ನಿಂತರೂ ಮತ್ತೆ ಕೆಲವರು ರೂಪೇಶ್ ವಿರುದ್ದ ಅಸಮಾಧಾನ ಹೊರಹಾಕಿದ್ದರು. ಈ ಬಗ್ಗೆ ರೂಪೇಶ್ ಪೋಷಕರಿಗೂ ಕೆಲವರು ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ.
ರೂಪೇಶ್ ಶೆಟ್ಟಿ ಹೇಳಿದ್ದೇನು..??
ಕಲಿತದ್ದು ನಾನು ಕನ್ನಡ ಮೀಡಿಯಂನಲ್ಲಿ. ಆದರೆ ನಾನು ಗಡಿನಾಡ ಕನ್ನಡಿಗ. ನಾನು ಹುಟ್ಟಿದ್ದು ಮಂಗಳೂರಿನಿಂದ 30 ಕಿ.ಮೀ ದೂರದ ಕೇರಳದ ಕಾಸರಗೋಡಿನಲ್ಲಿ. ನಾವು ಗಡಿನಾಡ ಕನ್ನಡಿಗರು. ಕನ್ನಡ ಕಲಿಯಲು ಆಸೆ ಇದ್ದರೂ ಅಲ್ಲಿ ಕಲಿಯೋದು ಕಷ್ಟ. ಅಲ್ಲಿ ಶಾಲೆಯಲ್ಲಿ ಕನ್ನಡ ಕಲಿಸೋ ಮಾಸ್ಟರ್ ಇಲ್ಲ. ಆದರೆ ನಾನು ಕೇರಳದಲ್ಲಿ ಇದ್ದರೂ ಕನ್ನಡ ಮೀಡಿಯಂನಲ್ಲಿ ಕಲಿತಿದ್ದು. ಅಷ್ಟು ಆತ್ಮವಿಶ್ವಾಸವನ್ನು ಕನ್ನಡ ಕಲಿಸಿ ಅಲ್ಲಿನ ಶಿಕ್ಷಕರು ನಮಗೆ ಕೊಟ್ಟಿದ್ದಾರೆ ಎಂದಿದ್ದರು..