Jaggesh : ಜಾರಕಿಹೊಳಿ ಕುಟುಂದವರು ವಾಮಾಚಾರದವರು – ಜಗ್ಗೇಶ್
ನವರಸ ನಾಯಕ ಜಗ್ಗೇಶ್ ಅವರು ನಟನೆಯ ಜೊತೆಗೆ ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ.. ಬಿಜೆಪಿ ನಾಯಕರಾಗಿರುವ ಜಗ್ಗೇಶ್ ಅವರು ವಿಧಾನಪರಿಷತ್ ಸದಸ್ಯರೂ ಕೂಡ ಹೌದು..!
ಅಂದ್ಹಾಗೆ ಇತ್ತೀಚೆಗೆ ಅವರು ಜಾರಕಿಹೊಳಿ ಪರಿವಾರದವರ ವಿರುದ್ಧ ಕಿಡಿಕಾರಿದ್ದಾರೆ.. ಡಿಕ್ಷನರಿ ಮಾಡಿದ್ದು, ಆಂಗ್ಲರು ಆಂಗ್ಲರಿಗೆ ದೇಶ ಒಡೆದು ಆಳುವ ಚಿಂತೆನೆಯಿತ್ತು. ಅವರಿಗೆ ದೇಶವನ್ನ ಕೂಡಿಸಿ ಒಗ್ಗಟ್ಟಾಗಿರಲಿ ಅನ್ನುವ ಚಿಂತನೆ ಇರಲಿಲ್ಲ. ಅವರು ಸಾವಿರ ಅರ್ಥ ಕೊಡಬಹುದು. ಆದರೆ ನೀವು ಹಿಂದೂವಾಗಿ ಈ ಮಣ್ಣಲ್ಲಿ ಜನಿಸಿದವರು ಎಂದಿದ್ದಾರೆ..
ಕೆಂಪೇಗೌಡ ಏರ್ ಪೋರ್ಟ್ ಬಳಿ ಮಾತನಾಡಿದ ಅವರು, ಸರ್ವೇಜನ ಸುಖಿನೋ ಭವಂತು ಅಂತ ಹೇಳೋ ಧರ್ಮ ಯಾವುದಾದರೂ ಇದ್ರೆ ಅದು ನಮ್ಮ ಹಿಂದೂ ಧರ್ಮ. ಆದರೆ ಜಾರಕಿಹೊಳಿಯವರಿಗೆ ಏನೂ ಗೊತ್ತಿಲ್ಲ. ಯಾಕಂದ್ರೆ ಅವರು ವಾಮಾಚಾರ ಫ್ಯಾಮಿಲಿಯವರು ಸ್ಮಶಾನ ಪ್ರೀತಿಸುವವರು ಎಂದು ಹೇಳಿದರು.
ಸ್ಮಶಾನವನ್ನ ಪ್ರೀತಿಸುವವರು ಯಾರು ಅಂದ್ರೆ ಅವರು ನಮ್ಮ ಸಂಸ್ಕೃತಿಯನ್ನ ಒಪ್ಪದೆ ಇರುವವರು. ಮಾಠಮಂತ್ರ ಮಾಯಾಜಾಲ ಮಾಡುವಂತವರು. ಅವರ ಸಂಖ್ಯೆ ಶೇ.1% ಅವರು ಇಂತವರ ಹೇಳಿಕೆಗಳನ್ನ ನಿಜವಾಗ್ಲೂ ಹಿಂದೂ ಅನ್ನೋ ಹೆಮ್ಮೆಯನ್ನಿಟ್ಟುಕೊಂಡಿರೋ ಹಿಂದೂಗಳು ಕ್ಷಮಿಸಲ್ಲ ಎಂದು ಕಿಡಿಕಾರಿದರು.