Kantara ಸಿನಿಮಾ ಸ್ಥಗಿತಕ್ಕೆ ದಲಿತ ಸಮುದಾಯದ ಆಗ್ರಹ..!!
ವರಾಹ ರೂಪಂ ಹಾಡಿನ ವಿವಾದದ ಬೆನ್ನಲ್ಲೇ ಇದೀಗ ಸೂಪರ್ ಸಕ್ಸಸ್ ಫುಲ್ ಆಗಿ ಪ್ರದರ್ಶನ ಕಾಣ್ತಿರುವ ಕಾಂತಾರ ಸಿನಿಮಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ..
ಸಿನಿಮಾದಲ್ಲಿ ದಲಿತ ಅವಹೇಳನಕಾರಿ ವಿಚಾರಗಳಿವೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಮತಾ ಸೈನಿಕದಳದ ರಾಜ್ಯ ಕಾರ್ಯದರ್ಶಿ ಲೋಲಾಕ್ಷ ಮಾತನಾಡಿ, ಕಾಂತಾರ ಸಿನಿಮಾದ ಕೆಲವೊಂದು ಪಾತ್ರಗಳಲ್ಲಿ ದಲಿತ ವಿರೋಧಿ ವಿಚಾರಗಳಿದ್ದು, ಇದು ದೈವಾರಾಧನೆಯಲ್ಲಿ ತೊಡಗಿರುವ ದಲಿತರ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಸಿನಿಮಾವನ್ನ ತಕ್ಷಣವೇ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದ್ದಾರೆ..
ವೈಯಕ್ತಿಕ ಅಭಿಪ್ರಾಯ ಏನಾದ್ರೂ ಇರಬಹುದು ನಮಗೆ ಸಿನಿಮಾ ತಂಡದ ಬಗ್ಗೆ ಆಕ್ಷೇಪಣೆಯಿಲ್ಲ. ಆದರೆ ಸೆನ್ಸಾರ್ ಮಂಡಳಿ ಕಾನೂನಿನ ಚೌಕಟ್ಟಿನಲ್ಲಿ ಸಿನಿಮಾವನ್ನು ಕೂಲಂಕಷವಾಗಿ ಪರಿಶೀಲಿಸಿ ಆಕ್ಷೇಪಣೆ ಇರುವ ಭಾಗಗಳಿಗೆ ಕತ್ತರಿ ಹಾಕಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ..
ಸಮತಾ ಸೈನಿಕದಳದ ರಾಜ್ಯ ಕಾರ್ಯದರ್ಶಿ ಲೋಲಾಕ್ಷ, ದೈವಾರಾಧನೆಯ ಬಗ್ಗೆ ಸೆನ್ಸಾರ್ ಬೋರ್ಡ್ ಗೆ ಅರಿವು ಇಲ್ಲದಿದ್ದಲ್ಲಿ ಈ ಬಗ್ಗೆ ಅಧ್ಯಯನ ಮಾಡಿರುವ ಸಂಶೋಧಕರನ್ನು ಇರಿಸಿಕೊಂಡು ಆ ಕೆಲಸ ಮಾಡಬಹುದಿತ್ತು. ಆದರೆ ಸೆನ್ಸಾರ್ ಮಂಡಳಿ ಇದಾವುದನ್ನೂ ಮಾಡದೆ ನಿರ್ಲಕ್ಷ್ಯ ವಹಿಸಿದೆ. ಅಲ್ಲದೆ ದೈವಗಳು ಅಭಯ ನೀಡುತ್ತದೆಯೇ ಹೊರತು ಕತ್ತಿಯಿಂದ ಇರಿದು ಕೊಲ್ಲುವ ಕಾರ್ಯ ಮಾಡುವುದಿಲ್ಲ. ಇದು ದೈವಾರಾಧನೆಯ ವಿಕೃತಿಯಾಗಿದೆ. ಸಿನಿಮಾದಲ್ಲಿ ಇಂತಹ ಹಲವಾರು ನಿಂದನಕಾರಿ ಅಂಶಗಳಿದ್ದು, ಇದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.