Krishna : ನಟ ಕೃಷ್ಣ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಅವರ ತಂದೆ ಕೃಷ್ಣ ಅವರ ನಿಧನಕ್ಕೆ ಅನೇಕ ಗಣ್ಯರು , ಸಿನಿಮಾ ತಾರೆಯರು ಸಂತಾಪ ಸೂಚಿಸುತ್ತಿದ್ದಾರೆ..
ಪ್ರಧಾನಿ ನರೇಂದ್ರ ಮೋದಿ ಅವರು ಕೃಷ್ಣ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಕೃಷ್ಣ ಲೆಜೆಂಡರಿ ನಟರಾಗಿದ್ದು, ತಮ್ಮ ನಟನೆ ಮೂಲಕ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿ ಇದ್ದರು ಎಂದು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡು ಲೋಕಸಭಾ ಸದಸ್ಯರಾಗಿಯೂ ಕೃಷ್ಣ ಅವರು ಗುರುತಿಸಿಕೊಂಡಿದ್ದರು..
ಟಾಲಿವುಡ್ ನ ಸ್ಟಾರ್ ನಟ ಪ್ರಿನ್ಸ್ ಮಹೇಶ್ ಬಾಬು ಅವರು ಕೆಲ ದಿನಗಳ ಹಿಂದಷ್ಟೇ ತಾಯಿಯನ್ನ ಕಳೆದುಕೊಂಡ ನೋವಿನಲ್ಲಿದ್ದರು.. ಇದೀಗ ತಂದೆಯನ್ನೂ ಕಳೆದುಕೊಂಡಿದ್ದಾರೆ.
ಆ ವರ್ಷದ ಆರಂಭವೇ ಮಹೇಶ್ ಬಾಬು ಅವರ ಪರಿವಾರಕ್ಕೆ ಕರಾಳದಂತಾಗಿತ್ತು.. ಆರಂಭದಲ್ಲೇ ಅಣ್ಣನನ್ನ ಕಳೆದುಕೊಂಡಿದ್ದರು , ನಂತರ ತಾಯಿ ಈಗ ತಂದೆಯನ್ನ ಕಳೆದುಕೊಂಡಿದ್ದು , ಮಹೇಶ್ ಬಾಬು ಅವರಿಗೆ ಅಭಿಮಾನಿಗಳು ಧೈರ್ಯ ತುಂಬುವ ಕೆಲಸ ಮಾಡ್ತಿದ್ದಾರೆ.