Kaali : ಅಭಿಶೇಕ್ ಅಂಬರೀಶ್ – ಸಪ್ತಮಿ ಗೌಡರ ‘ಕಾಳಿ’ ಸಿನಿಮಾ ಮುಹೂರ್ತ..!!
ಸ್ಯಾಂಡಲ್ ವುಡ್ ನ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಕಾಳಿ ಸಿನಿಮಾದಲ್ಲಿ ಕಾಂತಾರ ಚೆಲುವೆ ಸಪ್ತಮಿ ಗೌಡ ಬಣ್ಣ ಹಚ್ಚುತ್ತಿದ್ದಾರೆ..
ಈ ಸಿನಿಮಾದ ಮುಹೂರ್ತ ಸೋಮವಾರ ಬೆಳಿಗ್ಗೆ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ.. 1990 ರ ದಶಕದ ಕಾವೇರಿ ಗಲಭೆಯ ಕಥೆಯಾಧಾರಿತ ಕಾಳಿ ಸಿನಿಮಾಗೆ ಎಸ್ ಕೃಷ್ಣ ಆಕ್ಷನ್ ಕಟ್ ಹೇಳ್ತಿದ್ದಾರೆ..
‘ಕಾಳಿ’ ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ಮೂರನೆಯ ಚಿತ್ರವಾಗಿದೆ. ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರವನ್ನು ನಿರ್ಮಿಸುವ ಮೂಲಕ ಪ್ರಾರಂಭವಾದ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯು, ಆ ನಂತರ ಪುನೀತ್ ರಾಜ್ಕುಮಾರ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಘೋಷಿಸಿತ್ತು.
ಆದರೆ, ಪುನೀತ್ ಅವರ ಅಗಲಿಕೆಯ ನಂತರ ಸಂಸ್ಥೆಯ ಎರಡನೇ ನಿರ್ಮಾಣವನ್ನು ಅವರಿಗೇ ಅರ್ಪಿಸಲಾಗಿದೆ..
ಕಾಳಿ ಈ ಸಿನಿಮಾ ನಿರ್ಮಾಣ ಸಂಸ್ಥೆಯ ಮೂರನೇ ಸಿನಿಮಾವಾಗಿದೆ..